Header Ads Widget

Responsive Advertisement

ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಾಸಕ ಕೆ.ಜಿ. ಬೋಪಯ್ಯನವರಿಂದ ನಿಧಿ ಸಮರ್ಪಣೆ


ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಹಮ್ಮಿಕೊಂಡಿರುವ ನಿಧಿ ಸಮರ್ಪಣಾ ಅಭಿಯಾನದಡಿಯಲ್ಲಿ ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೆ.ಕೆ. ಮಹೇಶ್‌ ಕುಮಾರ್ ಅವರ ಮೂಲಕ ಮಡಿಕೇರಿಯ ತಮ್ಮ ಮನೆಯಲ್ಲಿ ನಿಧಿಯನ್ನು ಸಮರ್ಪಿಸಿದರು.

ಈ ಸಂದರ್ಭ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅರುಣ್‌ ಕೂರ್ಗ್‌, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಪಿ.ಎಂ.ರವಿ, ಬಿ.ಜೆ.ಪಿಯ ಪೊನ್ನಚ್ಚನಮಧು, ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಮಹೇಶ್‌ಅಪ್ಪು, ಈಶ್ವರ್‌ ಹಾಗೂ ಯವ ಮೋರ್ಚಾದ ವಿವೇಕ್‌ನರೇನ್ ಉಪಸ್ಥಿತರಿದ್ದರು.

ನಿಧಿಯನ್ನು ಸಮರ್ಪಿಸಿ ಮಾತನಾಡಿದ ಕೆ.ಜಿ.ಬೋಪಯ್ಯನವರು 1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ತಾವು ಪಾಲ್ಗೋಂಡ  ನೆನೆಪುಗಳನ್ನು ಹಂಚಿಕೊಂಡರು. ಈಗ ಭವ್ಯ ರಾಮಂದಿರ ನಿರ್ಮಾಣಕ್ಕೆ ನಿಧಿಯನ್ನು ಸಮರ್ಪಿಸಿದ್ದು ನನ್ನ ಸೌಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು. ʼಇದೊಂದು ಪವಿತ್ರ ಕಾರ್ಯವಾಗಿದ್ದು, ಮನೆ ಮನೆಗೆ ಕಾರ್ಯಕರ್ತರು ಬಂದಾಗ ರಶೀದಿ ಪಡೆದು ತಮ್ಮ ಕೈಲಾದಷ್ಟು ಹಣವನ್ನು ಪ್ರೀತಿ ಪೂರ್ವಕವಾಗಿ ಸಮರ್ಪಿಸಬೇಕು’ ಎಂದು ಈ ಸಂದರ್ಭದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಮನವಿ ಮಾಡಿದರು.